25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!