30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ


ವೇಣೂರು: ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಫೆ.22 ರಿಂದ ಮಾರ್ಚ್ ಒಂದರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಫೆ.17ರಂದು ವೇಣೂರಿನ ಯಾತ್ರಿನಿವಾಸದಲ್ಲಿ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿ ಸಕಾಲಿಕ ಮಾರ್ಗದರ್ಶನ ನೀಡಿದರು.
ಸರ್ವರ ಸಹಕಾರದೊಂದಿಗೆ ಮಹಾಮಸ್ತಕಾಭಿಷೇಕ ಯಶಶ್ವಿಯಾಗಿ  ಧರ್ಮಪ್ರಭಾವನೆಯಾಗಲಿ ಎಂದು ಅವರು ಹಾರೈಸಿದರು.


ಅಭಿಷೇಕ ಸಮಿತಿ, ಪೂಜಾಸಮಿತಿ, ಆಹಾರಸಮಿತಿ, ಮಹಿಳಾಸಮಿತಿ ಮೊದಲಾದ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿದ ಪೂಜ್ಯ ಸ್ವಾಮೀಜಿಯವರು ಸೂಕ್ತ ಮಾರ್ಗದರ್ಶನ ನೀಡಿದರು.
ಮಸ್ತಕಾಭಿಷೇಕಕ್ಕೆ ಬೇಕಾದ ಪೂಜ್ಯದ್ರವ್ಯಗಳನ್ನು ಉಚಿತ ಕೊಡುಗೆಯಾಗಿ ನೀಡಿದ ತುಮಕೂರಿನ ಉದ್ಯಮ ರಾಜೇಂದ್ರ ಕುಮಾರ್ ಅವರನ್ನು ಸ್ವಾಮೀಜಿಯವರು ಗೌರವಿಸಿ ಆಶೀರ್ವದಿಸಿದರು.


ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿದರು.
ಸರ್ಕಾರದ ವತಿಯಿಂದ ಮಾರ್ಗದರ್ಶಿಅಧಿಕಾರಿ ಮೂಡಬಿದ್ರೆಯ ಮಾಣಿಕ್ಯ, ಎಂ. ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ ಕಂಬಳಿ, ವಿಕಾಸ್ ಜೈನ್ ಪೆರಿಂಜೆ ಉಪಸ್ಥಿತರಿದ್ದರು.
ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!