22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗುರುವಾನಯನಕೆರೆ ವ್ಯಾಪ್ತಿಯ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟ ಎ ಮತ್ತು ಬಿ ಇವರ ಸಂಯುಕ್ತ ಆಶ್ರಯದಲ್ಲಿ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಇವರ ನೇತ್ರತ್ವದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗು ಪದಗ್ರಹಣ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಿಲಾತಬೆಟ್ಟು ಸಹಕಾರಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕರು ಮಂಜಪ್ಪ ಮೂಲ್ಯ ಅತ್ತಾಜೆ , ರೂಪಗಂಗಾಧರ್ ರೂಪಶ್ರೀ ಗಾರ್ಮೆಂಟ್ಸ್ ಬಸವನಗುಡಿ, ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ ಪೂಜಾರಿ, ಜನಜಾಗೃತೀ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ ಆಚಾರ್ಯ, ಶ್ರೀಮತಿ ಗುಣವತಿ ಬಸವನಗುಡಿ ಬಿ ಒಕ್ಕೂಟ ಅಧ್ಯಕ್ಷರು ಹಾಗು ಪಿಲಾತಬೆಟ್ಟು ಪಂಚಾಯತ್ ಸದಸ್ಯರು ಪುಷ್ಪ ಮೋಹನ್, ಮಡಂತ್ಯಾರ್ ಪಂಚಾಯತ್ ಸದಸ್ಯರು ಪಾರ್ವತಿ, ಕವಲಾಮುಡುರು ಪಂಚಾಯತ್ ಸದಸ್ಯರು ಕಲಿಲ್ ಅಹಮ್ಮದ್, ಎ ಒಕ್ಕೂಟದ ನೂತನ ಅಧ್ಯಕ್ಷರಾದ ಗೋದಾವರಿ ಹಾಗು ಬಿ ಒಕ್ಕೂಟದ ನೂತನ ಅಧ್ಯಕ್ಷ ಚಂದ್ರಶೇಖರ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಯೋಜನಾಧಿಕಾರಿಗಳಾದ ದಯಾನಂದ ಪೂಜಾರಿಯವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ತಿಳಿಸಿದರು. ಪರಮ ಪೂಜ್ಯ ಖಾವಂದರಿಂದ ‘ಅಣ್ಣ ಜಾಗೃತಿ’ ಪ್ರಶಸ್ತಿ ಪುರಸ್ಕಾರ ಪಡೆದ ಮಡಂತ್ಯಾರ್ ವಲಯ ಜನಜಾಗೃತೀ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಇವರನ್ನು ಒಕ್ಕೂಟದ ವತಿಯಿಂದ ಎಲ್ಲಾ ಗಣ್ಯರ ಸಮ್ಮುಕದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಸ್ವಾಗತವನ್ನು ಕೇಶವತಿ ವಹಿಸಿಕೊಂಡರು, ಒಕ್ಕೂಟದ ವರದಿಯನ್ನು ಸೇವಾಪ್ರತಿನಿಧಿಯಾದ ಭಾರತೀ ಓದಿದರು, ಮಡಂತ್ಯಾರು ವಲಯ ಮೇಲ್ವಿಚಾರಕರು ಆಗಿರುವ ವಸಂತ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು, ವೆಂಕಟೇಶ್ ಧನ್ಯವಾದವಿತ್ತರು . ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.

Related posts

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!