25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯನ್ನು ಫೆ.17ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಲತಾ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು.

ಸಭೆಯು ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪಂ.ಕಾರ್ಯದರ್ಶಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಹಾಗೂ ಹಳ್ಳಿ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಮಾಡಿದ ಪಂಚಾಯತ್ ಅಧ್ಯಕ್ಷರು ಶುಭ ಹಾರೈಸಿದರು. ಒಕ್ಕೂಟ ವರದಿಯನ್ನು ಒಕ್ಕೂಟ ಕಾರ್ಯದರ್ಶಿಯವರು ಮಂಡಿಸಿದರು ಮತ್ತು ಜಮೆ ಮತ್ತು ಖರ್ಚುನ್ನು ಸಭೆಯಲ್ಲಿ ಎಮ್.ಬಿ.ಕೆ ವಾಣಿಶ್ರೀ ಮಂಡಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ವತಿಯಿಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಿತೀಶ್ ಇವರಿಗೆ ಸನ್ಮಾನಿಸಲಾಯಿತು. ನಂತರ ಇವರು ಎನ್. ಆರ್. ಎಲ್. ಎಂ. ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ನಂತರ ತಾಲೂಕು ವಲಯ ಮೇಲ್ವಿಚಾರಕರಾದ ಜಯನಂದ ಎನ್. ಆರ್. ಎಲ್. ಎಂ. ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ನಂತರ BRP-EP ಯಾದ ವೀಣಾ ಕೃಷಿಯೇತರ ಚಟುವಟಿಕೆ ಬಗ್ಗೆ ಮಾತನಾಡಿದರು .ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಒಕ್ಕೂಟ ಚೆನ್ನಾಗಿ ನಡೆಯುತಿದೆ, ಇನ್ನೂ ಮುಂದೆಯೂ ಒಕ್ಕೂಟ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ನಂತರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಒಕ್ಕೂಟದ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ,ಉಪಾಧ್ಯಕ್ಷರು ,ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರ ಪದಗ್ರಹಣ ಮಾಡಲಾಯಿತು. ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹೂಗುಚ್ಛ ನಡವಳಿ ಕೊಡುದರ ಮೂಲಕ ಹಸ್ತಾಂತರ ಮಾಡಲಾಯಿತು. ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗತ್ವಧರಿತ ದೌರ್ಜನ್ಯ ಅಭಿಯಾನದ ಬಗ್ಗೆ ಸದಸ್ಯರಿಗೆ ಅರಿವು ಮೂಡಿಸಲಾಯಿತು. ಸಭೆಯಲ್ಲಿ 150 ಸದಸ್ಯರು ಭಾಗಿಯಾಗಿದ್ದರು. ಪಂಚಾಯತ್ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, MBK, LCRP,ಕೃಷಿ ಸಖಿ ಹಾಗೂ ಪಶುಸಖಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಕುಮಾರಿ ವೀಕ್ಷಾದೀಪ ನಿರೂಪಿಸಿದರು. ಶ್ರೀಮತಿ ಶೃತಿ ಸ್ವಾಗತಿಸಿದರು. ಶ್ರೀಮತಿ ರೋಹಿಣಿ ಧನ್ಯವಾದವಿತ್ತರು.

Related posts

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!