April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯನ್ನು ಫೆ.17ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಲತಾ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು.

ಸಭೆಯು ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪಂ.ಕಾರ್ಯದರ್ಶಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಹಾಗೂ ಹಳ್ಳಿ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಮಾಡಿದ ಪಂಚಾಯತ್ ಅಧ್ಯಕ್ಷರು ಶುಭ ಹಾರೈಸಿದರು. ಒಕ್ಕೂಟ ವರದಿಯನ್ನು ಒಕ್ಕೂಟ ಕಾರ್ಯದರ್ಶಿಯವರು ಮಂಡಿಸಿದರು ಮತ್ತು ಜಮೆ ಮತ್ತು ಖರ್ಚುನ್ನು ಸಭೆಯಲ್ಲಿ ಎಮ್.ಬಿ.ಕೆ ವಾಣಿಶ್ರೀ ಮಂಡಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ವತಿಯಿಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಿತೀಶ್ ಇವರಿಗೆ ಸನ್ಮಾನಿಸಲಾಯಿತು. ನಂತರ ಇವರು ಎನ್. ಆರ್. ಎಲ್. ಎಂ. ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ನಂತರ ತಾಲೂಕು ವಲಯ ಮೇಲ್ವಿಚಾರಕರಾದ ಜಯನಂದ ಎನ್. ಆರ್. ಎಲ್. ಎಂ. ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ನಂತರ BRP-EP ಯಾದ ವೀಣಾ ಕೃಷಿಯೇತರ ಚಟುವಟಿಕೆ ಬಗ್ಗೆ ಮಾತನಾಡಿದರು .ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಒಕ್ಕೂಟ ಚೆನ್ನಾಗಿ ನಡೆಯುತಿದೆ, ಇನ್ನೂ ಮುಂದೆಯೂ ಒಕ್ಕೂಟ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ನಂತರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಒಕ್ಕೂಟದ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ,ಉಪಾಧ್ಯಕ್ಷರು ,ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರ ಪದಗ್ರಹಣ ಮಾಡಲಾಯಿತು. ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹೂಗುಚ್ಛ ನಡವಳಿ ಕೊಡುದರ ಮೂಲಕ ಹಸ್ತಾಂತರ ಮಾಡಲಾಯಿತು. ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗತ್ವಧರಿತ ದೌರ್ಜನ್ಯ ಅಭಿಯಾನದ ಬಗ್ಗೆ ಸದಸ್ಯರಿಗೆ ಅರಿವು ಮೂಡಿಸಲಾಯಿತು. ಸಭೆಯಲ್ಲಿ 150 ಸದಸ್ಯರು ಭಾಗಿಯಾಗಿದ್ದರು. ಪಂಚಾಯತ್ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, MBK, LCRP,ಕೃಷಿ ಸಖಿ ಹಾಗೂ ಪಶುಸಖಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಕುಮಾರಿ ವೀಕ್ಷಾದೀಪ ನಿರೂಪಿಸಿದರು. ಶ್ರೀಮತಿ ಶೃತಿ ಸ್ವಾಗತಿಸಿದರು. ಶ್ರೀಮತಿ ರೋಹಿಣಿ ಧನ್ಯವಾದವಿತ್ತರು.

Related posts

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
error: Content is protected !!