25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.

ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಗಟ್ಟಿ ಅವರು, ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ ಬೆಳೆಸಿದ್ದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಉಜಿರೆಯಲ್ಲಿ ನೆಲೆಸಿದ್ದ ಇವರು ಕೃಷಿಯಲ್ಲಿ ತೊಡಗಿದ್ದರು. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಂತಾಪ ಸೂಚಿಸಿದರು.

Related posts

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya
error: Content is protected !!