ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Leave a Comment

error: Content is protected !!