25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!