September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 27.09.1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ತದ ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರೋಪಿಯ ಪರವಾಗಿ ಜೆ.ಕೆ. ಅಸೋಸಿಯೇಟ್ಸ್ ಬೆಳ್ತಂಗಡಿ. ಇದರ ಖ್ಯಾತ ಹಿರಿಯ ವಕೀಲರಾದ ಜೆ.ಕೆ.ಪೌಲ್ ಹಾಗೂ ಸಹ ವಕೀಲರಾದ ಜಿತೇಶ್ ಕೆ, ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದ್ದರು.

Related posts

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಬಂದಾರು ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!