September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಫೆ.13 ರಂದು ಫೆ.15 ರ ತನಕ ವಿವಿಧ ಸಾಂಸ್ಕೃತಿಕ ಹಾಗೂ ಕ್ಷೇತ್ರದ ದೈವಗಳಿಗೆ ನೇಮೋತ್ಸವ ಜರಗಿತು.


ಫೆ. 13 ರಂದು ಗೊನೆ ಮೂರ್ತ,ಪಡಿಯಕ್ಕಿ ವಿತರಣೆ, ಶ್ರೀ ಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಹಾಗೂ ಮಹಾ ಪೂಜೆ,ಫೆ‌.14 ರಂದು ಕಲಶ ಮಹಾ ಪೂಜೆ,ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಭಜನೆ,ಮಹಾಪೂಜೆ, ಬಲಿ,ಕವಾಟ ಬಂಧನ,ಫೆ.15 ರಂದು ಕೊಯ್ಯೂರು ಉಣಿಲೆ ಗುತ್ತಿನಿಂದ ದೈವಗಳ ಭಂಡಾರ ಆಗಮನ, ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ,ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ, ಕೊಯ್ಯೂರು ನಾದ ನಾಟ್ಯಾಲ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.ರಾತ್ರಿ ಅನ್ನದಾನದ ಸೇವಾರ್ಥಿ ಕೊಯ್ಯೂರು ಕಡಮ್ಮಾಜೆ ಶ್ರೀಮತಿ ಹೇಮಾವತಿ ಮತ್ತು ಉಮೇಶ್ ಗೌಡ ಮನೆಯವರಿಂದ ನಡೆಯಿತು.


ರಾತ್ರಿ ಕ್ಷೇತ್ರದ ದೈವಗಳಿಗೆ ಮತ್ತು ಉಳ್ಳಾಲ್ತಿ ದೈವದ ನೇಮೋತ್ಸವ ಮತ್ತು ಮಹಾ ಪೂಜೆ ಜರುಗಿತು. ಫೆ.16 ರಂದು ಸಂಪ್ರೋಕ್ಷಣೆ ಮಹಾ ಪೂಜೆಯೊಂದಿಗೆ ಸಮಾಪನಗೊಂಡಿದೆ.
ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಚಂಡಭಾನು ಪಾಂಬೇಲು,ಅಧ್ಯಕ್ಷ ವಸಂತ ಗೌಡ ಕಡಮ್ಮಾಜೆ, ಉಪಾಧ್ಯಕ್ಷ ವಿಜಯ ಗೌಡ ಬರೆ ಮೇಲು, ಆಡಳಿತ ಮೊಕ್ತೇಸರ ಕೆ.ಬಿ.ಹರಿಶ್ಚಂದ್ರ ಬಲ್ಲಾಳ್,ಕೊಯ್ಯೂರು ದೇವಸ್ಥಾನದ ಪ್ರಧಾನ ಅರ್ಚಕ ಆಶೋಕ್ ಕಮಾರ್,ಕಾರ್ಯದರ್ಶಿ ದನಜಂಯ ಆಚಾರ್ಯ ಕೊಡ್ಯೇಲು, ಜತೆ ಕಾರ್ಯದರ್ಶಿ ಪದ್ಮನಾಭ ಗೌಡ ಬೊಳೋಳಿ, ಕೋಶಾಧಿಕಾರಿ ಪೆರ್ನು ಗೌಡ ಬೆಲ್ಡೆ, ಉಪ ಕೋಶಾಧಿಕಾರಿ ಶೇಖರ ಗೌಡ ಬೊಳೊಳಿ,ಭಜನ ಮಂಡಳಿ ಸದಸ್ಯರು, ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಭಕ್ತರು ಆಗಮಿಸಿದರು.

Related posts

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!