22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಭಿಸಿದರು. ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು. ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅಧ್ಯಕ್ಷರಾಗಿ ಟೋಮಿ ಥೋಮಸ್ ತೋಟತ್ತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು. ಶಾಹೀನ್ ಅತ್ತಾಜೆಯವರ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
error: Content is protected !!