July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya
error: Content is protected !!