September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!