23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು.

ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು ಕಂಬಳಗಳಲ್ಲಿ ಅಡ್ಡ ಹಲಗೆ ವಿಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಲೋಕಯ್ಯ ಗೌಡ ಅವರು ಹಲವಾರು ಬಾರಿ ಪ್ರಥಮ ಸ್ಥಾನ ಪಡೆದಿದ್ದರು. ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಕಂಬಳ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಜಿಲ್ಲೆಯಾದ್ಯಂತ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿದ್ದರು. ಪುರುಷ ಬಳಗವನ್ನು ಸ್ಥಾಪಿಸಿ , ಅದರ ಸ್ಥಾಪಕಧ್ಯಕ್ಷರಾಗಿ , ಇತ್ತೀಚಿನ ತನಕವೂ ತಂಡವನ್ನು ಮುನ್ನಡೆಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿದಿದ್ದ ಅವರು ಅತ್ಯಂತ ಸೌಮ್ಯ ಸ್ವಭಾವದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮೀ , ಗಂಡು ಮಕ್ಕಳಾದ ನಾರಾಯಣ , ಸುರೇಶ್ , ಮುರಳೀಧರ್, ಹೆಣ್ಣು ಮಗಳಾದ ಸುಜಾತ ಸೇರಿದಂತೆ ಸಾವಿರಾರು ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya
error: Content is protected !!