September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ


ವೇಣೂರು: ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಫೆ.22 ರಿಂದ ಮಾರ್ಚ್ ಒಂದರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಫೆ.17ರಂದು ವೇಣೂರಿನ ಯಾತ್ರಿನಿವಾಸದಲ್ಲಿ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿ ಸಕಾಲಿಕ ಮಾರ್ಗದರ್ಶನ ನೀಡಿದರು.
ಸರ್ವರ ಸಹಕಾರದೊಂದಿಗೆ ಮಹಾಮಸ್ತಕಾಭಿಷೇಕ ಯಶಶ್ವಿಯಾಗಿ  ಧರ್ಮಪ್ರಭಾವನೆಯಾಗಲಿ ಎಂದು ಅವರು ಹಾರೈಸಿದರು.


ಅಭಿಷೇಕ ಸಮಿತಿ, ಪೂಜಾಸಮಿತಿ, ಆಹಾರಸಮಿತಿ, ಮಹಿಳಾಸಮಿತಿ ಮೊದಲಾದ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ ನಡೆಸಿದ ಪೂಜ್ಯ ಸ್ವಾಮೀಜಿಯವರು ಸೂಕ್ತ ಮಾರ್ಗದರ್ಶನ ನೀಡಿದರು.
ಮಸ್ತಕಾಭಿಷೇಕಕ್ಕೆ ಬೇಕಾದ ಪೂಜ್ಯದ್ರವ್ಯಗಳನ್ನು ಉಚಿತ ಕೊಡುಗೆಯಾಗಿ ನೀಡಿದ ತುಮಕೂರಿನ ಉದ್ಯಮ ರಾಜೇಂದ್ರ ಕುಮಾರ್ ಅವರನ್ನು ಸ್ವಾಮೀಜಿಯವರು ಗೌರವಿಸಿ ಆಶೀರ್ವದಿಸಿದರು.


ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿದರು.
ಸರ್ಕಾರದ ವತಿಯಿಂದ ಮಾರ್ಗದರ್ಶಿಅಧಿಕಾರಿ ಮೂಡಬಿದ್ರೆಯ ಮಾಣಿಕ್ಯ, ಎಂ. ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ ಕಂಬಳಿ, ವಿಕಾಸ್ ಜೈನ್ ಪೆರಿಂಜೆ ಉಪಸ್ಥಿತರಿದ್ದರು.
ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!