25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ಕೊಯ್ಯೂರು, ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇದರ ಸಹಕಾರದೊಂದಿಗೆ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಮಲೆಬೆಟ್ಟು ಶ್ರೀ ವನದುರ್ಗ ದೇವಾಲಯದ ವನಸಿರಿ ಕಲಾಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸುರೇಂದ್ರ ಯೋಜನಾಧಿಕಾರಿಯವರು ಶ್ರೀ.ಕ್ಷೇ .ಧ.ಗ್ರಾ.ಯೋ.ಬೆಳ್ತಂಗಡಿ ತಾಲೂಕು, ಧಾರ್ಮಿಕ ಉಪನ್ಯಾಸಕರಾಗಿ ಶ್ರೀಮತಿ ಉಷಾ ಕಾಮತ್ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಪೂಜಾ ಸಮಿತಿ ಅಧ್ಯಕ್ಷ ಕರಿಯಪ್ಪ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ, ಉಪಾಧ್ಯಕ್ಷ ಹರೀಶ್ ಗೌಡ, ಅರ್ಚಕರಾದ ಅಶೋಕ್ ಭಟ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ನಾಥ್ ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರುಗಳು ಹಾಗೂ ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಒಕ್ಕೂಟಗಳ ಪದಗ್ರಹಣವನ್ನು ತಾಲೂಕು ಯೋಜನಾಧಿಕಾರಿಯವರು ನಡೆಸಿಕೊಟ್ಟರು. ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು, ರವೀಂದ್ರನಾಥ್ ಸ್ವಾಗತಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಕುಸುಮಾವತಿ ವಂದಿಸಿದರು. ಹಾಗೂ ಸೇವಾಪ್ರತಿನಿಧಿಯಾದ ಶ್ರೀಮತಿ ಲೀಲಾ ವರದಿ ವಾಚಿಸಿದರು. ಕಾರ್ಯ ಕ್ರಮದಲ್ಲಿ ಪಂಚಾಯತ್ ಸದಸ್ಯರು, ಒಕ್ಕೂಟಗಳ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya
error: Content is protected !!