July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ಕೊಯ್ಯೂರು, ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇದರ ಸಹಕಾರದೊಂದಿಗೆ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಮಲೆಬೆಟ್ಟು ಶ್ರೀ ವನದುರ್ಗ ದೇವಾಲಯದ ವನಸಿರಿ ಕಲಾಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸುರೇಂದ್ರ ಯೋಜನಾಧಿಕಾರಿಯವರು ಶ್ರೀ.ಕ್ಷೇ .ಧ.ಗ್ರಾ.ಯೋ.ಬೆಳ್ತಂಗಡಿ ತಾಲೂಕು, ಧಾರ್ಮಿಕ ಉಪನ್ಯಾಸಕರಾಗಿ ಶ್ರೀಮತಿ ಉಷಾ ಕಾಮತ್ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಪೂಜಾ ಸಮಿತಿ ಅಧ್ಯಕ್ಷ ಕರಿಯಪ್ಪ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ, ಉಪಾಧ್ಯಕ್ಷ ಹರೀಶ್ ಗೌಡ, ಅರ್ಚಕರಾದ ಅಶೋಕ್ ಭಟ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ನಾಥ್ ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರುಗಳು ಹಾಗೂ ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಒಕ್ಕೂಟಗಳ ಪದಗ್ರಹಣವನ್ನು ತಾಲೂಕು ಯೋಜನಾಧಿಕಾರಿಯವರು ನಡೆಸಿಕೊಟ್ಟರು. ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು, ರವೀಂದ್ರನಾಥ್ ಸ್ವಾಗತಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಕುಸುಮಾವತಿ ವಂದಿಸಿದರು. ಹಾಗೂ ಸೇವಾಪ್ರತಿನಿಧಿಯಾದ ಶ್ರೀಮತಿ ಲೀಲಾ ವರದಿ ವಾಚಿಸಿದರು. ಕಾರ್ಯ ಕ್ರಮದಲ್ಲಿ ಪಂಚಾಯತ್ ಸದಸ್ಯರು, ಒಕ್ಕೂಟಗಳ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
error: Content is protected !!