23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!