26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
error: Content is protected !!