ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!