23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

ನಡ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ಸಾಹಿತ್ಯೋತ್ಸವ ಕಾರ್ಯಕ್ರಮದ ಜೂನಿಯರ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾನೆ.

ಇವನು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸೈಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರು ಶಬ ಇವರ ಪುತ್ರನಾಗಿದ್ದಾರೆ.


ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಇದರ ಬೆಳ್ತಂಗಡಿ ಲಾಯಿಲ ಘಟಕದ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಸೆಕ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ, ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಫೆ.12 ರಂದು ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರು, ಶಾಲೆ,ತಾಲೂಕು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!