25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

ನಡ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ಸಾಹಿತ್ಯೋತ್ಸವ ಕಾರ್ಯಕ್ರಮದ ಜೂನಿಯರ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾನೆ.

ಇವನು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸೈಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರು ಶಬ ಇವರ ಪುತ್ರನಾಗಿದ್ದಾರೆ.


ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಇದರ ಬೆಳ್ತಂಗಡಿ ಲಾಯಿಲ ಘಟಕದ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಸೆಕ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ, ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಫೆ.12 ರಂದು ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರು, ಶಾಲೆ,ತಾಲೂಕು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!