July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ ಉರ್ದು ಹಮ್ಡ್ ಸ್ಪರ್ಧೆಯಲ್ಲಿ ಸೈಫುಲ್ಲಾ ಪರಪ್ಪು ಪ್ರಥಮ ಸ್ಥಾನ ಪಡೆದು ವಿಜೇತರಾದ ಪರಪ್ಪು ಯೂನಿಟ್ ನ ಎಸ್.ಎಸ್.ಎಫ್ ನ ಸದಸ್ಯರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.


ಈ ಸ್ಪರ್ಧೆಯಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿ ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.
ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣ ಲಡ್ಡ ಮುಳ್ಳಗುಡ್ಡೆ
ಬಟ್ಟೆಮಾರುವರೇಗೆ ವಾಹನ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದಿನ್ ಸಖಾಫಿ, ಅಬೂಬಕ್ಕರ್ ಹಾಜಿ, ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಸ್ತಫ ಹಿಮಮಿ, ಸಂಶೀರ್ ಸಖಾಫಿ, ಇಕ್ಬಾಲ್ ಮರ್ಜೂಕಿ, ಅಬ್ದುಲ್ ಕರೀಮ್, ಬಿ.ಎಂ. ಆದಂ ಹಾಜಿ, ಎನ್.ಎನ್ ಮಹಮ್ಮದ್, ಸಿದ್ದೀಕ್ ಜಿ ಎಚ್, ಫಯಾಜ್, ರಹಿಮಾನ್ ಮಾಸ್ಟರ್, ಹಾಗೂ ಜಮಾಅತರು,ಎಸ್ಎಸ್ಎಫ್ ನ ಸದಸ್ಯರು, ಎಸ್ ವೈ ಎಸ್, ಕೆ.ಎಮ್.ಜೆ ಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪರಪ್ಪು ದರ್ಗಾದಲ್ಲಿ ಝಿಯಾರತ್ ನೆರವೇರಿಸಲಾಯಿತು.

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya
error: Content is protected !!