April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ಕೊಯ್ಯೂರು, ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇದರ ಸಹಕಾರದೊಂದಿಗೆ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಮಲೆಬೆಟ್ಟು ಶ್ರೀ ವನದುರ್ಗ ದೇವಾಲಯದ ವನಸಿರಿ ಕಲಾಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸುರೇಂದ್ರ ಯೋಜನಾಧಿಕಾರಿಯವರು ಶ್ರೀ.ಕ್ಷೇ .ಧ.ಗ್ರಾ.ಯೋ.ಬೆಳ್ತಂಗಡಿ ತಾಲೂಕು, ಧಾರ್ಮಿಕ ಉಪನ್ಯಾಸಕರಾಗಿ ಶ್ರೀಮತಿ ಉಷಾ ಕಾಮತ್ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಪೂಜಾ ಸಮಿತಿ ಅಧ್ಯಕ್ಷ ಕರಿಯಪ್ಪ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ, ಉಪಾಧ್ಯಕ್ಷ ಹರೀಶ್ ಗೌಡ, ಅರ್ಚಕರಾದ ಅಶೋಕ್ ಭಟ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ನಾಥ್ ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರುಗಳು ಹಾಗೂ ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಒಕ್ಕೂಟಗಳ ಪದಗ್ರಹಣವನ್ನು ತಾಲೂಕು ಯೋಜನಾಧಿಕಾರಿಯವರು ನಡೆಸಿಕೊಟ್ಟರು. ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು, ರವೀಂದ್ರನಾಥ್ ಸ್ವಾಗತಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಕುಸುಮಾವತಿ ವಂದಿಸಿದರು. ಹಾಗೂ ಸೇವಾಪ್ರತಿನಿಧಿಯಾದ ಶ್ರೀಮತಿ ಲೀಲಾ ವರದಿ ವಾಚಿಸಿದರು. ಕಾರ್ಯ ಕ್ರಮದಲ್ಲಿ ಪಂಚಾಯತ್ ಸದಸ್ಯರು, ಒಕ್ಕೂಟಗಳ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

Related posts

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!