April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆಯ ರತ್ನಗಿರಿ ಶ್ರೀ ಸನ್ಯಾಸಿಗುಳಿಗ ಕ್ಷೇತ್ರದಲ್ಲಿ ಫೆಬ್ರವರಿ 27, 28, 29 ಮತ್ತು ಮಾರ್ಚ್ 01, 02ರಂದು ನಡೆಯಲಿರುವ ಪುನರ್‌ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ‘ಪರ್ವ- 2024’ ಎಂಬ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಏರ್ಪಡಿಸಲಾಗಿದೆ.

ಈ ಸಂದರ್ಭದಲ್ಲಿ ತುಳುನಾಡಿನ ಸರ್ವ ದೈವ ನರ್ತಕರಿಗೆ, ದೈವಸ್ಥಾನ ಹಾಗೂ ಗರೋಡಿ ಪಾತ್ರಿಗಳಿಗೆ, ದೈವದ ಆಯುಧ, ಮೊಗಮೂರ್ತಿ ಹಿಡಿಯುವ ಪೂಜಾರಿ, ಮುಕ್ಕಾಲ್ಲಿ, ಜೀಟಿಗೆ ಹಿಡಿಯುವವರಿಗೆ, ಮಧ್ಯಸ್ಥರಿಗೆ ಮತ್ತಿತರ ಸರ್ವ ಪ್ರಕಾರದ ದೈವಾರಾಧನೆಯ ಚಾಕರಿ ಮಾಡುವವರಿಗೆ, ದೈವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರಿಗೆ, ಭಂಡಾರದ ಮನೆತನದವರಿಗೆ, ಗುತ್ತು ಬರ್ಕೆಯವರಿಗೆ ಗೌರವಾರ್ಪಣೆ ಸಲ್ಲಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪರ್ವ ಮಹಾ ಸಮ್ಮೇಳನದ ಸಂಚಾಲಕ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

ದೈವಾರಾಧನೆಗೆ ಸಂಬಂಧಪಟ್ಟಂತ ಸರ್ವರೂ ಪಾಲ್ಗೊಳ್ಳುವ ಈ ಮಹೋನ್ನತ ಕಾರ್ಯಕ್ರಮದಲ್ಲಿ ತಾವೆಲ್ಲರೂ ಇರಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ. ಆದ್ದರಿಂದ ‘ಪರ್ವ-2024’ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನಕ್ಕೆ ಸರ್ವ ದೈವಾರಾಧಕರು ಆಗಮಿಸಿ ನಮ್ಮ ಸನ್ಮಾನ ಸ್ವೀಕರಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ‘ಪರ್ವ 2024’ರ ಪ್ರಧಾನ ಸಂಚಾಲಕರಾದ ಸಂಪತ್ ಬಿ. ಸುವರ್ಣ (ಸಂಪರ್ಕ ಸಂಖ್ಯೆ 9663373940 ಅಥವಾ 9448188974)ರವರನ್ನು ಸಂಪರ್ಕಿಸಬಹುದು.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!