33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya
error: Content is protected !!