September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya
error: Content is protected !!