24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

ನಡ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ಸಾಹಿತ್ಯೋತ್ಸವ ಕಾರ್ಯಕ್ರಮದ ಜೂನಿಯರ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾನೆ.

ಇವನು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸೈಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರು ಶಬ ಇವರ ಪುತ್ರನಾಗಿದ್ದಾರೆ.


ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಇದರ ಬೆಳ್ತಂಗಡಿ ಲಾಯಿಲ ಘಟಕದ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಸೆಕ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ, ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಫೆ.12 ರಂದು ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರು, ಶಾಲೆ,ತಾಲೂಕು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

Related posts

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!