25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ ಉರ್ದು ಹಮ್ಡ್ ಸ್ಪರ್ಧೆಯಲ್ಲಿ ಸೈಫುಲ್ಲಾ ಪರಪ್ಪು ಪ್ರಥಮ ಸ್ಥಾನ ಪಡೆದು ವಿಜೇತರಾದ ಪರಪ್ಪು ಯೂನಿಟ್ ನ ಎಸ್.ಎಸ್.ಎಫ್ ನ ಸದಸ್ಯರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.


ಈ ಸ್ಪರ್ಧೆಯಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿ ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.
ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣ ಲಡ್ಡ ಮುಳ್ಳಗುಡ್ಡೆ
ಬಟ್ಟೆಮಾರುವರೇಗೆ ವಾಹನ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದಿನ್ ಸಖಾಫಿ, ಅಬೂಬಕ್ಕರ್ ಹಾಜಿ, ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಸ್ತಫ ಹಿಮಮಿ, ಸಂಶೀರ್ ಸಖಾಫಿ, ಇಕ್ಬಾಲ್ ಮರ್ಜೂಕಿ, ಅಬ್ದುಲ್ ಕರೀಮ್, ಬಿ.ಎಂ. ಆದಂ ಹಾಜಿ, ಎನ್.ಎನ್ ಮಹಮ್ಮದ್, ಸಿದ್ದೀಕ್ ಜಿ ಎಚ್, ಫಯಾಜ್, ರಹಿಮಾನ್ ಮಾಸ್ಟರ್, ಹಾಗೂ ಜಮಾಅತರು,ಎಸ್ಎಸ್ಎಫ್ ನ ಸದಸ್ಯರು, ಎಸ್ ವೈ ಎಸ್, ಕೆ.ಎಮ್.ಜೆ ಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪರಪ್ಪು ದರ್ಗಾದಲ್ಲಿ ಝಿಯಾರತ್ ನೆರವೇರಿಸಲಾಯಿತು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!