22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ ಉರ್ದು ಹಮ್ಡ್ ಸ್ಪರ್ಧೆಯಲ್ಲಿ ಸೈಫುಲ್ಲಾ ಪರಪ್ಪು ಪ್ರಥಮ ಸ್ಥಾನ ಪಡೆದು ವಿಜೇತರಾದ ಪರಪ್ಪು ಯೂನಿಟ್ ನ ಎಸ್.ಎಸ್.ಎಫ್ ನ ಸದಸ್ಯರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.


ಈ ಸ್ಪರ್ಧೆಯಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿ ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.
ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣ ಲಡ್ಡ ಮುಳ್ಳಗುಡ್ಡೆ
ಬಟ್ಟೆಮಾರುವರೇಗೆ ವಾಹನ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದಿನ್ ಸಖಾಫಿ, ಅಬೂಬಕ್ಕರ್ ಹಾಜಿ, ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಸ್ತಫ ಹಿಮಮಿ, ಸಂಶೀರ್ ಸಖಾಫಿ, ಇಕ್ಬಾಲ್ ಮರ್ಜೂಕಿ, ಅಬ್ದುಲ್ ಕರೀಮ್, ಬಿ.ಎಂ. ಆದಂ ಹಾಜಿ, ಎನ್.ಎನ್ ಮಹಮ್ಮದ್, ಸಿದ್ದೀಕ್ ಜಿ ಎಚ್, ಫಯಾಜ್, ರಹಿಮಾನ್ ಮಾಸ್ಟರ್, ಹಾಗೂ ಜಮಾಅತರು,ಎಸ್ಎಸ್ಎಫ್ ನ ಸದಸ್ಯರು, ಎಸ್ ವೈ ಎಸ್, ಕೆ.ಎಮ್.ಜೆ ಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪರಪ್ಪು ದರ್ಗಾದಲ್ಲಿ ಝಿಯಾರತ್ ನೆರವೇರಿಸಲಾಯಿತು.

Related posts

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!