27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಸಹಕಾರ ಕ್ಷೇತ್ರದಲ್ಲಿ ಸಾಧನೆ ಗೈದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ನಿರಂಜನ್ ಬಾವಂತಬೆಟ್ಟು ಇವರಿಗೆ ಅವರ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ಶ್ರದ್ಧಾಂಜಲಿ ಮತ್ತು ನುಡಿ ನಮನ ಫೆ.19 ರಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳ್ತಂಗಡಿ ಶಾಖೆಯ ಸಭಾ ಭವನದಲ್ಲಿ ಜರಗಿತು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ರಾಜಶ್ರೀ ಹೆಗ್ಡೆ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರು, ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ನುಡಿನಮನ ಸಲ್ಲಿಸಿ ನಿರಂಜನ್ ರವರು ಸಹಕಾರಿ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆಯ ಬಗ್ಗೆ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಜಿರೆ ಸಹಕಾರ ಸಂಘದ ಅಧ್ಯಕ್ಷ ಇ. ಸುಂದರ ಗೌಡ, ಎಲ್. ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಈಶ್ವರ ಭಟ್ ಮಾಯಿಲ್ತೊಡಿ, ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಪತ್ರಕರ್ತ ದೇವಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!