24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾ,ಜ.ಪ ಅಭ್ಯರ್ಥಿಯಾಗಿ ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್’ರವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಫೆ. 25ರಂದು ಬಂಟ್ವಾಳ ಬಂಟರ ಭವನದಲ್ಲಿ ನಡೆಯಲಿರುವ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆಯು ಫೆ.19 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾದ ಜನಾರ್ಧನರವರು ಮಾತನಾಡುತ್ತಾ ದ.ಕ ಜಿಲ್ಲೆಯಲ್ಲಿ ಹಿಂದೂ ಸಂಘಟನೆಯನ್ನು ಕಟ್ಟಿ ಬೆಳೆಸುವಲ್ಲಿ ಸತ್ಯಜಿತ್‌ ಸುರತ್ಕಲ್’ರವರ ಪಾತ್ರ ಮಹತ್ತರದಾಗಿದೆ, ಹಿಂದೂ ಕಾರ್ಯಕರ್ತರ ಬಲಿದಾನವಾದಾಗ ಮುಂದೆ ನಿಂತು ಅವರ ಮನೆಯ ಸಮಸ್ಯೆಗಳನ್ನು ಪರಿಹರಿಸುವ ಜಿಲ್ಲೆಯ ಏಕೈಕ ನಾಯಕ ಸತ್ಯಜಿತ್‌ ಸುರತ್ಕಲ್’ರವರಿಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಬಾಜಪ’ದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.

ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್ ಮಾತನಾಡಿ ಹಿಂದೂ ಕಾರ್ಯಕರ್ತರ ಆಶಯ ಮತ್ತು ಕೋರಿಕೆಯಂತೆ ತಾನು ರಾಜಕೀಯ ಪ್ರವೇಶ ಮಾಡಲು ಸಿದ್ದನಿದ್ದೇನೆ. ಇದುವರೆಗೆ ರಾಜಕೀಯವಾಗಿ ನಾನು ಯಾವುದೇ ಸ್ಥಾನಮಾನ ಕೇಳಿದವನಲ್ಲ ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಅನಿವಾರ್ಯವಾಗಿ ರಾಜಕೀಯ ಪ್ರವೇಶ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭಿಮಾನಿಗಳ ಅಭಿಲಾಷೆಯಂತೆ ಬಾಜಪ ಪಕ್ಷದಿಂದ ಅವಕಾಶ ಸಿಕ್ಕಿಲ್ಲಿ ನಾನು ಸ್ಪರ್ದಿಸಲು ಸಿದ್ದ. ಈ ನಿಟ್ಟಿನಲ್ಲಿ ಫೆ-25ರಂದು ಬಂಟ್ವಾಳದ ಬಂಟರ ಭವನದಲ್ಲಿ ನಡೆಯುವ ಬೃಹತ್ ಜನಾಗ್ರಹ ಸಭೆಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ತಾಲೂಕಿನ ವಿವಿಧ ಕಡೆಯಿಂದ ಸತ್ಯಜಿತ್‌ ಸುರತ್ಕಲ್ ಅಭಿಮಾನಿಗಳು ಆಗಮಿಸಿದ್ದರು.


‌ ವೇದಿಕೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾದ ಮನೋಜ್ ಕುಂಜರ್ಪ ಉಪಸ್ಥಿತರಿದ್ದರು. ಸುನಿಲ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!