23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ಕೊಯ್ಯೂರು, ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇದರ ಸಹಕಾರದೊಂದಿಗೆ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಮಲೆಬೆಟ್ಟು ಶ್ರೀ ವನದುರ್ಗ ದೇವಾಲಯದ ವನಸಿರಿ ಕಲಾಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸುರೇಂದ್ರ ಯೋಜನಾಧಿಕಾರಿಯವರು ಶ್ರೀ.ಕ್ಷೇ .ಧ.ಗ್ರಾ.ಯೋ.ಬೆಳ್ತಂಗಡಿ ತಾಲೂಕು, ಧಾರ್ಮಿಕ ಉಪನ್ಯಾಸಕರಾಗಿ ಶ್ರೀಮತಿ ಉಷಾ ಕಾಮತ್ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಪೂಜಾ ಸಮಿತಿ ಅಧ್ಯಕ್ಷ ಕರಿಯಪ್ಪ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ, ಉಪಾಧ್ಯಕ್ಷ ಹರೀಶ್ ಗೌಡ, ಅರ್ಚಕರಾದ ಅಶೋಕ್ ಭಟ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ನಾಥ್ ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರುಗಳು ಹಾಗೂ ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಒಕ್ಕೂಟಗಳ ಪದಗ್ರಹಣವನ್ನು ತಾಲೂಕು ಯೋಜನಾಧಿಕಾರಿಯವರು ನಡೆಸಿಕೊಟ್ಟರು. ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು, ರವೀಂದ್ರನಾಥ್ ಸ್ವಾಗತಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಕುಸುಮಾವತಿ ವಂದಿಸಿದರು. ಹಾಗೂ ಸೇವಾಪ್ರತಿನಿಧಿಯಾದ ಶ್ರೀಮತಿ ಲೀಲಾ ವರದಿ ವಾಚಿಸಿದರು. ಕಾರ್ಯ ಕ್ರಮದಲ್ಲಿ ಪಂಚಾಯತ್ ಸದಸ್ಯರು, ಒಕ್ಕೂಟಗಳ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

Related posts

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!