April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya
error: Content is protected !!