24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!