July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!