25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ವಿ. ಶೇಷಗೌಡ ಯಾನೆ ಚಿಂಟು (32) ಎಂಬವರ ದೂರಿನಂತೆ, ಫೆ.:18 ರಂದು ರಾತ್ರಿ ಮನೆಯಲ್ಲಿರುವಾಗ, ಆರೋಪಿಗಳಾದ ಜಯಂತ್‌ ಗೌಡ, ಸ್ವಸ್ತಿಕ್‌ ಶಶಾಂಕ್ ಎಂಬವರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ವಿ. ಶೇಷ ಗೌಡರವರ ಬಾವ ಪ್ರದೀಪ್‌ ರವರನ್ನು ಕರೆದಿರುತ್ತಾರೆ. ಆಗ ವಿಶೇಷ ಗೌಡ ಹಾಗೂ ಪ್ರದೀಪ್‌ ಹೊರಗೆ ಬಂದಿದ್ದು, ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದು, ನಂತರ ವಿಶೇಷ ಗೌಡ ಮನೆಯ ಹಂಚುಗಳಿಗೆ ಹಾನಿ ಮಾಡಿ ಹೋಗಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವಿ. ಶೇಷ ಗೌಡ ಹಾಗೂ ಪ್ರದೀಪ್‌ ರವರು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ, ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 11/2024 ಕಲಂ: 447,323,504,324,427,506 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು,

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಾಲು ಗ್ರಾಮ ನಿವಾಸಿ ಸ್ವಸ್ತಿಕ್‌ ಜೆ (25) ಎಂಬವರು ನೀಡಿದ ಪ್ರತಿದೂರಿನಂತೆ, ಶಶಾಂಕ್‌ ಎಂಬವರುಗಳಿಗೆ ಫೆ.18 ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ಆರೋಪಿಗಳಾದ ವಿಶೇಷಗೌಡ ಯಾನೆ ಚಿಂಟು, ಪ್ರದೀಪ್‌, ವೈಶಾಕ್‌, ಸುರೇಶ್‌ ಹಾಗೂ ಪಝಲ್‌ ಎಂಬವರುಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ ಹಾಗೂ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಸ್ವಸ್ತಿಕ್‌ ಜೆ ಹಾಗೂ ಶಶಾಂಕ್ ರವರುಗಳು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ಪ್ರತಿದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 12/2024 ಕಲಂ: 143,147,148,324,323,504,506 ಜೊತೆಗೆ 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya
error: Content is protected !!