22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ ಉರ್ದು ಹಮ್ಡ್ ಸ್ಪರ್ಧೆಯಲ್ಲಿ ಸೈಫುಲ್ಲಾ ಪರಪ್ಪು ಪ್ರಥಮ ಸ್ಥಾನ ಪಡೆದು ವಿಜೇತರಾದ ಪರಪ್ಪು ಯೂನಿಟ್ ನ ಎಸ್.ಎಸ್.ಎಫ್ ನ ಸದಸ್ಯರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.


ಈ ಸ್ಪರ್ಧೆಯಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿ ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.
ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣ ಲಡ್ಡ ಮುಳ್ಳಗುಡ್ಡೆ
ಬಟ್ಟೆಮಾರುವರೇಗೆ ವಾಹನ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದಿನ್ ಸಖಾಫಿ, ಅಬೂಬಕ್ಕರ್ ಹಾಜಿ, ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಸ್ತಫ ಹಿಮಮಿ, ಸಂಶೀರ್ ಸಖಾಫಿ, ಇಕ್ಬಾಲ್ ಮರ್ಜೂಕಿ, ಅಬ್ದುಲ್ ಕರೀಮ್, ಬಿ.ಎಂ. ಆದಂ ಹಾಜಿ, ಎನ್.ಎನ್ ಮಹಮ್ಮದ್, ಸಿದ್ದೀಕ್ ಜಿ ಎಚ್, ಫಯಾಜ್, ರಹಿಮಾನ್ ಮಾಸ್ಟರ್, ಹಾಗೂ ಜಮಾಅತರು,ಎಸ್ಎಸ್ಎಫ್ ನ ಸದಸ್ಯರು, ಎಸ್ ವೈ ಎಸ್, ಕೆ.ಎಮ್.ಜೆ ಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪರಪ್ಪು ದರ್ಗಾದಲ್ಲಿ ಝಿಯಾರತ್ ನೆರವೇರಿಸಲಾಯಿತು.

Related posts

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!