September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ : ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಲಿಯೋ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ನಮ್ಮ ಸುತ್ತಮುತ್ತಲಿರುವ ಪರಿಸರವನ್ನು ಸ್ವಚ್ಛವಾಗಿ ಹಾಗೂ ನೈರ್ಮಲ್ಯದಿಂದ ಕೂಡಿರುವಂತೆ ನೋಡಿಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಎನ್ ಎಸ್ ಎಸ್ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಒಟ್ಟು 13 ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಮಾಹಿತಿ ಫಲಕವನ್ನು ಅಳವಡಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಇವರು ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಬಸ್ ನಿಲ್ದಾಣಕ್ಕಾಗಿ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ, ಕುವೆಟ್ಟು ಗ್ರಾಮ ಪಂಚಾಯತ್, ನಗರ ಪಂಚಾಯತಿ ಬೆಳ್ತಂಗಡಿ, ಗ್ರಾಮ ಪಂಚಾಯಿತಿ ಲಾಯಿಲ, ಗ್ರಾಮ ಪಂಚಾಯತಿ ಉಜಿರೆ, ಗ್ರಾಮ ಪಂಚಾಯತ್ ಧರ್ಮಸ್ಥಳ ಸರಕಾರಿ ಶಾಲೆ ಕನ್ಯಾಡಿ, ಇವರು ಸ್ವಚ್ಛತೆಗೆ ನೀರು ಸರಬರಾಜು ಮಾಡುವ ಮೂಲಕ ಸಹಕರಿಸಿದರು, ಸಾರ್ವಜನಿಕರು ಉಪಹಾರ ನೀಡುವ ಮೂಲಕ ಸಹಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷರಾದ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ಅನಂತ ಕೃಷ್ಣ, ಮಾಜಿ ಪ್ರಾಂತ್ಯ ಅಧ್ಯಕ್ಷ ಲ. ನಿತ್ಯಾನಂದ ನಾವರ, ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕಾರ್ಯದರ್ಶಿ ನಿರೀಕ್ಷಾ ನಾವರ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ, ಉಪಾಧ್ಯಕ್ಷರಾದ ಕರಣ್ ಪವರ್, ಲಿಯೋ ಕಾರ್ಯಕ್ರಮ ಸಂಯೋಜಕ ದೀಕ್ಷಿತ್ ನಿಡ್ಲೆ, ಎನ್ಎಸ್ಎಸ್ ಕಾರ್ಯಕ್ರಮ ಪ್ರಯೋಜಕ ನಿಕ್ಷೇಪ್ ನಾವರ, ಲಯನ್ ಸದಸ್ಯರು, ಲಿಯೊ ಸದಸ್ಯರು, ಎನ್ಎಸ್ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!