July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ : ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಲಿಯೋ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ನಮ್ಮ ಸುತ್ತಮುತ್ತಲಿರುವ ಪರಿಸರವನ್ನು ಸ್ವಚ್ಛವಾಗಿ ಹಾಗೂ ನೈರ್ಮಲ್ಯದಿಂದ ಕೂಡಿರುವಂತೆ ನೋಡಿಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಎನ್ ಎಸ್ ಎಸ್ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಒಟ್ಟು 13 ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಮಾಹಿತಿ ಫಲಕವನ್ನು ಅಳವಡಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಇವರು ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಬಸ್ ನಿಲ್ದಾಣಕ್ಕಾಗಿ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ, ಕುವೆಟ್ಟು ಗ್ರಾಮ ಪಂಚಾಯತ್, ನಗರ ಪಂಚಾಯತಿ ಬೆಳ್ತಂಗಡಿ, ಗ್ರಾಮ ಪಂಚಾಯಿತಿ ಲಾಯಿಲ, ಗ್ರಾಮ ಪಂಚಾಯತಿ ಉಜಿರೆ, ಗ್ರಾಮ ಪಂಚಾಯತ್ ಧರ್ಮಸ್ಥಳ ಸರಕಾರಿ ಶಾಲೆ ಕನ್ಯಾಡಿ, ಇವರು ಸ್ವಚ್ಛತೆಗೆ ನೀರು ಸರಬರಾಜು ಮಾಡುವ ಮೂಲಕ ಸಹಕರಿಸಿದರು, ಸಾರ್ವಜನಿಕರು ಉಪಹಾರ ನೀಡುವ ಮೂಲಕ ಸಹಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷರಾದ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ಅನಂತ ಕೃಷ್ಣ, ಮಾಜಿ ಪ್ರಾಂತ್ಯ ಅಧ್ಯಕ್ಷ ಲ. ನಿತ್ಯಾನಂದ ನಾವರ, ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕಾರ್ಯದರ್ಶಿ ನಿರೀಕ್ಷಾ ನಾವರ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ, ಉಪಾಧ್ಯಕ್ಷರಾದ ಕರಣ್ ಪವರ್, ಲಿಯೋ ಕಾರ್ಯಕ್ರಮ ಸಂಯೋಜಕ ದೀಕ್ಷಿತ್ ನಿಡ್ಲೆ, ಎನ್ಎಸ್ಎಸ್ ಕಾರ್ಯಕ್ರಮ ಪ್ರಯೋಜಕ ನಿಕ್ಷೇಪ್ ನಾವರ, ಲಯನ್ ಸದಸ್ಯರು, ಲಿಯೊ ಸದಸ್ಯರು, ಎನ್ಎಸ್ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!