July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಗೇರುಕಟ್ಟೆ: ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಂದಿನ ಮೂರು ವರ್ಷದ ಅವಧಿಗೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆಯು ಗ್ರಾ.ಪಂ. ಅಧ್ಯಕ್ಷರಾದ ದಿವಾಕರ ಎಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮುಂದಿನ ಮೂರು ವರ್ಷದ ಅವಧಿಗೆ ವಿದ್ಯಾರ್ಥಿಗಳ ಅನುಪಾತದಂತೆ ಪರಿಶಿಷ್ಟ ಜಾತಿ/ಪಂಗಡ,ಅಲ್ಪಸಂಖ್ಯಾತ, ಮಹಿಳಾ ಮತ್ತು ಸಾಮಾನ್ಯ ಮೀಸಲಾತಿಯಂತೆ 18 ಜನ ಪೋಷಕ ಪ್ರತಿನಿಧಿಗಳನ್ನು ಪೋಷಕರು ಆಯ್ಕೆ ಮಾಡಿ, ಪೋಷಕ ಪ್ರತಿನಿಧಿಗಳ ಪೈಕಿ ಒಬ್ಬರು ಅಧ್ಯಕ್ಷರು, ಉಪಾದ್ಯಕ್ಷರು ಆಯ್ಕೆ ಮಾಡಲಾಯಿತು.


ಅಧ್ಯಕ್ಷ ಸ್ಥಾನಕ್ಕೆ ಹರೀಶ್ ಕುಮಾರ್ ಮತ್ತು ಸತೀಶ್ ಭಂಡಾರಿ ಇಬ್ಬರು ಆಕಾಂಕ್ಷಿಗಳು ಸ್ಪರ್ಧಿಸಿದ್ದರು. ಅಧ್ಯಕ್ಷರ ಆಯ್ಕೆಯನ್ನು ಪೋಷಕ ಪ್ರತಿನಿಧಿಗಳು ಕೈ ಎತ್ತುವ ಮೂಲಕ ಆಯ್ಕೆ ಮಾಡಿದರು. ಹರೀಶ್ ಕುಮಾರ್ ರವರಿಗೆ 14 ಬೆಂಬಲಿತರು ಸತೀಶ್ ಭಂಡಾರಿಯವರಿಗೆ 4 ಮಂದಿ ಬೆಂಬಲಿತರು ಕೈ ಎತ್ತಿ ಬಹುಮತದಂತೆ ಹರೀಶ್ ಕುಮಾರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮುನೀರಾ ಬಟ್ಟೆಮಾರು ಅವಿರೋಧ ಆಯ್ಕೆಯಾದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶ್ರೀಮತಿ ಶ್ವೇತಾ,ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಭುವನೇಶ್ ಜಿ, ಮಾಜಿ ಶಾಲಾಭಿವೃದ್ದಿ ಸಮಿತಿ ಸದಸ್ಯರು,ಪೋಷಕರು, ಶಾಲಾ ಶಿಕ್ಷಕರು ಹಾಜರಿದ್ದರು. ಮುಖ್ಯೋಪಾದ್ಯಾಯರಾದ ಶ್ರೀಮತಿ ಶಾಂತ ಎಸ್ ಶಾಲಾಭಿವೃದ್ದಿ ಸಮಿತಿಯ ರಚನಾ ನಡವಳಿಯನ್ನು ಸಭೆಗೆ ತಿಳಿಸಿದರು .ಶಿಕ್ಷಕ ಕೃಷ್ಣಪ್ರಸಾದ್ ಸ್ವಾಗತಿಸಿ, ದೈಹಿಕ ಶಿಕ್ಷಕ ರವಿರಾಜ್ ಕಾರ್ಯಕ್ರಮ ನಿರ್ವಹಿಸಿ, ಶಿಕ್ಷಕಿ ಶ್ರೀಮತಿ ಅನುರಾಧ ಬಿ.ಸಿ. ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
error: Content is protected !!