25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ : ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಲಿಯೋ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ನಮ್ಮ ಸುತ್ತಮುತ್ತಲಿರುವ ಪರಿಸರವನ್ನು ಸ್ವಚ್ಛವಾಗಿ ಹಾಗೂ ನೈರ್ಮಲ್ಯದಿಂದ ಕೂಡಿರುವಂತೆ ನೋಡಿಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಎನ್ ಎಸ್ ಎಸ್ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಒಟ್ಟು 13 ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಮಾಹಿತಿ ಫಲಕವನ್ನು ಅಳವಡಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಇವರು ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಬಸ್ ನಿಲ್ದಾಣಕ್ಕಾಗಿ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ, ಕುವೆಟ್ಟು ಗ್ರಾಮ ಪಂಚಾಯತ್, ನಗರ ಪಂಚಾಯತಿ ಬೆಳ್ತಂಗಡಿ, ಗ್ರಾಮ ಪಂಚಾಯಿತಿ ಲಾಯಿಲ, ಗ್ರಾಮ ಪಂಚಾಯತಿ ಉಜಿರೆ, ಗ್ರಾಮ ಪಂಚಾಯತ್ ಧರ್ಮಸ್ಥಳ ಸರಕಾರಿ ಶಾಲೆ ಕನ್ಯಾಡಿ, ಇವರು ಸ್ವಚ್ಛತೆಗೆ ನೀರು ಸರಬರಾಜು ಮಾಡುವ ಮೂಲಕ ಸಹಕರಿಸಿದರು, ಸಾರ್ವಜನಿಕರು ಉಪಹಾರ ನೀಡುವ ಮೂಲಕ ಸಹಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷರಾದ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ಅನಂತ ಕೃಷ್ಣ, ಮಾಜಿ ಪ್ರಾಂತ್ಯ ಅಧ್ಯಕ್ಷ ಲ. ನಿತ್ಯಾನಂದ ನಾವರ, ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕಾರ್ಯದರ್ಶಿ ನಿರೀಕ್ಷಾ ನಾವರ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ, ಉಪಾಧ್ಯಕ್ಷರಾದ ಕರಣ್ ಪವರ್, ಲಿಯೋ ಕಾರ್ಯಕ್ರಮ ಸಂಯೋಜಕ ದೀಕ್ಷಿತ್ ನಿಡ್ಲೆ, ಎನ್ಎಸ್ಎಸ್ ಕಾರ್ಯಕ್ರಮ ಪ್ರಯೋಜಕ ನಿಕ್ಷೇಪ್ ನಾವರ, ಲಯನ್ ಸದಸ್ಯರು, ಲಿಯೊ ಸದಸ್ಯರು, ಎನ್ಎಸ್ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya
error: Content is protected !!