24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಸ್ವಲ್ಪಹೊತ್ತು ಅರ್ಜಿದಾರರ ಪರವಕೀಲರವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿ. ಜಿಪಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂಕ್ತ ವಿಭಾಗೀಯನ್ಯಾಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನೂ ಪ್ರತಿವಾದಿ ಮಾಡಲಾಗಿದೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya
error: Content is protected !!