25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಸ್ವಲ್ಪಹೊತ್ತು ಅರ್ಜಿದಾರರ ಪರವಕೀಲರವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿ. ಜಿಪಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂಕ್ತ ವಿಭಾಗೀಯನ್ಯಾಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನೂ ಪ್ರತಿವಾದಿ ಮಾಡಲಾಗಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya
error: Content is protected !!