25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ : ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಲಿಯೋ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ನಮ್ಮ ಸುತ್ತಮುತ್ತಲಿರುವ ಪರಿಸರವನ್ನು ಸ್ವಚ್ಛವಾಗಿ ಹಾಗೂ ನೈರ್ಮಲ್ಯದಿಂದ ಕೂಡಿರುವಂತೆ ನೋಡಿಕೊಳ್ಳುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಎನ್ ಎಸ್ ಎಸ್ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಒಟ್ಟು 13 ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಮಾಹಿತಿ ಫಲಕವನ್ನು ಅಳವಡಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ. ಉಮೇಶ್ ಶೆಟ್ಟಿ ಇವರು ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಬಸ್ ನಿಲ್ದಾಣಕ್ಕಾಗಿ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ, ಕುವೆಟ್ಟು ಗ್ರಾಮ ಪಂಚಾಯತ್, ನಗರ ಪಂಚಾಯತಿ ಬೆಳ್ತಂಗಡಿ, ಗ್ರಾಮ ಪಂಚಾಯಿತಿ ಲಾಯಿಲ, ಗ್ರಾಮ ಪಂಚಾಯತಿ ಉಜಿರೆ, ಗ್ರಾಮ ಪಂಚಾಯತ್ ಧರ್ಮಸ್ಥಳ ಸರಕಾರಿ ಶಾಲೆ ಕನ್ಯಾಡಿ, ಇವರು ಸ್ವಚ್ಛತೆಗೆ ನೀರು ಸರಬರಾಜು ಮಾಡುವ ಮೂಲಕ ಸಹಕರಿಸಿದರು, ಸಾರ್ವಜನಿಕರು ಉಪಹಾರ ನೀಡುವ ಮೂಲಕ ಸಹಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷರಾದ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ಅನಂತ ಕೃಷ್ಣ, ಮಾಜಿ ಪ್ರಾಂತ್ಯ ಅಧ್ಯಕ್ಷ ಲ. ನಿತ್ಯಾನಂದ ನಾವರ, ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕಾರ್ಯದರ್ಶಿ ನಿರೀಕ್ಷಾ ನಾವರ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ, ಉಪಾಧ್ಯಕ್ಷರಾದ ಕರಣ್ ಪವರ್, ಲಿಯೋ ಕಾರ್ಯಕ್ರಮ ಸಂಯೋಜಕ ದೀಕ್ಷಿತ್ ನಿಡ್ಲೆ, ಎನ್ಎಸ್ಎಸ್ ಕಾರ್ಯಕ್ರಮ ಪ್ರಯೋಜಕ ನಿಕ್ಷೇಪ್ ನಾವರ, ಲಯನ್ ಸದಸ್ಯರು, ಲಿಯೊ ಸದಸ್ಯರು, ಎನ್ಎಸ್ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
error: Content is protected !!