24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ನಿಸರ್ಗ ಕರ್ಟನ್ ಹಾಗೂ ವಾಲ್ ಪೇಪರ್ ಉದ್ಯಮದೊಂದಿಗೆ ಉತ್ತಮ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಿ ಗ್ರಾಹಕರೊಂದಿಗೆ ಉತ್ತಮ ಸಂಭಂಧ ಹೊಂದಿರುವ ನಾಗೇಶ್ ಕೋಟ್ಯಾನ್ ರವರ ನಿಸರ್ಗ ಆರ್ಕೇಡ್‌ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ ಫೆ.೨೪ ರಂದು ನಡೆಯಲಿದೆ.


ಪ್ರಸಿದ್ದ ಗುರುವಾಯನಕೆರೆಯ ಮುಂಭಾಗದಲ್ಲಿ ನಿರ್ಮಿಸಿರುವ ಮೂರು ಅಂತಸ್ತಿನ ಕಟ್ಟಡಕ್ಕೆ ಉತ್ತಮ ವಿನ್ಯಾಸ ಮಾಡಲಾಗಿದೆ. ಮೊದಲ ಹಾಗೂ ಎರಡನೇ ಮಹಡಿಯಲ್ಲಿ ವಿವಿಧ ಉದ್ಯಮಕ್ಕೆ ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲಾಗಿದೆ. ಇಗಾಗಲೇ ಬಾಡಿಗೆಗೆ ಅಂಗಡಿ ಕೋಣೆಗಳ ಬುಕ್ಕಿಂಗ್ ಪೂರ್ಣಗೊಂಡಿದೆ. ಮೂರನೇ ಮಹಡಿಯಲ್ಲಿ ನಿಸರ್ಗ ಮನೆ ನಿರ್ಮಿಸಿದ್ದು ಮನೆಯು ವಾಸ್ತು ಹಾಗೂ ವಿವಿಧ ವಿನ್ಯಾಸದಿಂದ ಕೂಡಿದ್ದು ಎಲ್ಲರ ಗಮನ ಸೆಳೆಯಲಿದೆ.


ನಿಸರ್ಗ ಆರ್ಕೇಡ್‌ಗೆ ಆಗಮಿಸುವ ಗ್ರಾಹಕರಿಗೆ ಅನುಕೂಲವಾಗುವಂತೆ ಲಿಪ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆಯಿದೆ. ಭದ್ರತೆಗಾಗಿ ಸಿಸಿ ಕ್ಯಾಮರ ಅಳವಡಿಸಲಾಗಿದೆ.
ಪ್ರಶಾಂತ ಹಾಗೂ ಸುಂದರ ಪರಿಸರದ ಗುರುವಾಯನಕೆರೆಯ ಮುಂಭಾಗದಲ್ಲಿರುವ ನಿಸರ್ಗ ಆರ್ಕೇಡ್‌ಗೆ ಕೆರೆಯ ಸೌಂದರ್ಯದಿಂದ ಇನ್ನಷ್ಟು ಮೆರಗು ಬಂದಿದೆ.
ಫೆ.24 ಶನಿವಾರ ಗಂಟೆ 11.25 ಕ್ಕೆ ವೃಷಭ ಲಗ್ನದಲ್ಲಿ ನಡೆಯುವ ನಿಸರ್ಗ ಆರ್ಕೇಡ್‌ನ ಶುಭಾರಂಭ ಹಾಗೂ ಗೃಹ ಪ್ರವೇಶಕ್ಕೆ ಬಂಧು-ಮಿತ್ರರು ಆಗಮಿಸಿ ಶುಭವನ್ನು ಹಾರೈಸಬೇಕಾಗಿ ಸಂಸ್ಥೆಯ ಮಾಲಕರಾದ ನಾಗೇಶ್ ಕೋಟ್ಯಾನ್ ಮತ್ತು ಶ್ರೀಮತಿ ಯಶ್ಮಿತಾ ನಾಗೇಶ್, ಮಕ್ಕಳಾದ ಮಾ. ಯಶ್ವಿನ್ ಎನ್, ಮಾ ಯುವಿನ್ ಎನ್. ಪ್ರಕಟಣೆಯಲ್ಲಿ ತಿಳಿಸಿದರು.

ಬೆಳಿಗ್ಗೆ ಗಂಟೆ 10.00ಕ್ಕೆ ನಿಸರ್ಗ ಆರ್ಕೇಡ್ ಉದ್ಘಾಟನೆ, ದಿವಾ ಗಂಟೆ 11.25ಕ್ಕೆ ವೃಷಭ ಲಗ್ನದಲ್ಲಿ ಗೃಹ ಪ್ರವೇಶ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಗಂಟೆ 5.30 ಕ್ಕೆ ಕುಣಿತಾ ಭಜನೆ, ಸಂಜೆ 7.30ಕ್ಕೆ ದುರ್ಗಾ ಪೂಜೆ ನಡೆಯಲಿದೆ.

Related posts

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!