23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಸ್ವಲ್ಪಹೊತ್ತು ಅರ್ಜಿದಾರರ ಪರವಕೀಲರವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿ. ಜಿಪಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂಕ್ತ ವಿಭಾಗೀಯನ್ಯಾಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನೂ ಪ್ರತಿವಾದಿ ಮಾಡಲಾಗಿದೆ.

Related posts

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya
error: Content is protected !!