23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯಲ್ಲಿ ಕಲಿತು ಸಾಧನೆ ಮಾಡಿದವರ ಸಾಲಿಗೆ ನೀವು ಬರಬೇಕು, ನಿಮ್ಮ ಬದುಕಿನ ಕಥೆಗಳೇ ನಾಳೆ ಸಾಧನೆಯ ಕಥೆಗಳಾಗಿ ಬದಲಾಗಬೇಕು ಎಂದು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ರವರು ಅಭಿಪ್ರಾಯ ಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರರವರು ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಶ್ರೀಮತಿ ಅನಸೂಯ ವಂದಿಸಿದರು. 13 ದಿನಗಳ ಈ ಕಾರ್ಯಕ್ರಮದಲ್ಲಿ 31 ಅಭ್ಯರ್ಥಿಗಳು ಭಾಗವಹಿಸುವುದರ ಜೊತೆಗೆ 31 ವಿವಿಧ ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ರೂಪು ರೇಷೆಗಳನ್ನು ತಯಾರಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!