April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು.

ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಕುಮಾರ್ ಮಾತನಾಡಿ ಶಿರ್ಲಾಲು ಯುವಾವಾಹಿನಿ ಸಂಚಲನ ಸಮಿತಿ ಸಮಾಜಮುಖಿ ಕೆಲಸಗಳ ಮೂಲಕ ತಾಲೂಕಿಗೆ ಮದರಿಯಾಗುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ ಇನ್ನೂ ಮುಂದೆಯೂ ಹೊಸ ಸಮಿತಿ ಇನ್ನಷ್ಟು ಸಮಾಜಮುಖಿ ಕೆಲಸಕಾರ್ಯಗಳನ್ನು ಮಾಡುವಂತಗಲಿ ನಮ್ಮ ಸಹಕಾರ ಸದಾ ಇದೆ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ನೂತನ ಪದಾಧಿಕಾರಿಗಳನ್ನು ಗೌರವಿಸಿ ಸಂಘಟನೆಯ ಬಗ್ಗೆ ಮಾಹಿತಿ ನೀಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಒಂದು ವರ್ಷದ ಅವಧಿಯಲ್ಲಿ ಸಂಚಲನ ಸಮಿತಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ನಿಕಟಪೂರ್ವ ಅಧ್ಯಕ್ಷ ಜಯಕುಮಾರ್ ಇವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘ ಸಂಸ್ಥೆಯಿಂದ ಗೌರವಾರ್ಪಣೆ ಮಾಡಲಾಯಿತು. ವೇದಿಕೆಯಲ್ಲಿ ಯುವವಾಹಿನಿ ಸಂಚಲನ ಸಮಿತಿಯ ನಿಯೋಜಿತ ಅಧ್ಯಕ್ಷ ಸನತ್ ಕುಮಾರ್ ಪಿಜಾಕೋಡಂಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಕುಶಲಾ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೇಶ್ ಕುಮಾರ್ ಕಟ್ಟ ಇವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಚಲನ ಸಮಿತಿಯ ಕಾರ್ಯದರ್ಶಿ ಯತೀಶ್ ಕರಂಬಾರು ವಾರ್ಷಿಕ ವರದಿ ಮಂಡನೆ ಮಾಡಿದರು. ವಿಜಯ್ ಕುಮಾರ್ ಹೇಡ್ಯದಡ್ಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪದಾಧಿಕಾರಿಗಳು ಸಹಕಾರ ನೀಡಿದರು. ಪುರಂದರ ಕಟ್ರಬೈಲ್ ಧನ್ಯವಾದವಿತ್ತರು.

Related posts

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ