26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮಾಲಾಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.22ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

‘ಒಂದು ಹೆಜ್ಜೆ ಸ್ವಚ್ಛತೆಯೆಡೆಗೆ’ ರಸ್ತೆ ಬದಿಗಳಲ್ಲಿ ಕಸ ಹಾಕುವವರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿ ಕಾಲೇಜು ವಿದ್ಯಾರ್ಥಿಯೋರ್ವಳು ಪಂಚಾಯತ್ ಗೆ ಆಗ್ರಹಿಸಿದಳು.
ದೇಜಪ್ಪ ಮೂಲ್ಯರ ಮನೆ ಬಳಿ ತಂತಿಗಳು ಜೋತು ಬಿದ್ದಿದ್ದು ಸರಿಪಡಿಸುವಂತೆ ಮೆಸ್ಕಾಂ ಇಲಾಖೆ ಗೆ ಗ್ರಾಮಸ್ಥರು ಮನವಿ ಮಾಡಿದರು. ಸೋಣಂದೂರು ಅಂಗನವಾಡಿ ಬಳಿ ಹಳೆ ಬಾವಿವಿದ್ದು ಅದನ್ನು ಮುಚ್ಚುವಂತೆ ಮನವಿ ಮಾಡಲಾಯಿತು.

ಮಾರ್ಗದರ್ಶಿ ಅಧಿಕಾರಿ ಮಾತನಾಡಿ ಗ್ರಾಮ ಸಭೆಯು ಆರೋಗ್ಯಕರವಾದಂತಹ ವಿಚಾರದ ಕುರಿತಾಗಿ ಉತ್ತಮವಾಗಿ ನಡೆಯಿತು ಎಂದು ಹೇಳಿದರು.

ಉಪಾಧ್ಯಕ್ಷರಾದ ಶ್ರೀಮತಿ ಸೆಲೆಸ್ಟಿನ್ ಡಿಸೋಜ, ಸದಸ್ಯರಾದ ಎಸ್ ಬೇಬಿ ಸುವರ್ಣ, ಶ್ರೀಮತಿ ಸುಸ್ಸಾನ, ದಿನೇಶ್ ಡಿ. ಕರ್ಕೇರ, ಕೆ ಸುಧಾಕರ ಆಳ್ವ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ಶ್ರೀಮತಿ ಜಯಂತಿ, ಶ್ರೀಮತಿ ತುಳಸಿ ಬಿ, ರಾಜೇಶ್, ಶ್ರೀಮತಿ ಫರ್ಜನಾ, ಶ್ರೀಮತಿ ವಿದ್ಯಾ ಪಿ. ಸಾಲಿಯಾನ್, ಶ್ರೀಮತಿ ಗುಲಾಬಿ, ಶ್ರೀಮತಿ ಐರಿನ್ ಮೋರಾಸ್, ದಿನೇಶ್, ಶ್ರೀಮತಿ ರುಬೀನಾ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ರೈ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿ, ಧನ್ಯವಾದವಿತ್ತರು.

Related posts

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya
error: Content is protected !!